ಕೆಫೆ ಸ್ಫೋಟ ಪ್ರಕರಣ: ಬಾಂಬರ್ ಸುಳಿವು ನೀಡಿದರೆ ₹10 ಲಕ್ಷ ಬಹುಮಾನ ಘೋಷಣೆ
06:38 PM Mar 06, 2024 IST
|
Bcsuddi
Advertisement
ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದ ಜನತೆಯನ್ನು ಬೆಚ್ಚಿಬಿಳಿಸುವ ಘಟನೆಯೊಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿತ್ತು.
Advertisement
ಇದೀಗಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಾಂಬರ್ ಫೋಟೋ ಹಂಚಿಕೊಂಡಿರುವ ಎನ್ಐಎ ಅಧಿಕಾರಿಗಳು, ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ ಹಾಗೂ ಮಾಹಿತಿದಾರರು ನೀಡಿದ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳದೇ ಗೌಪ್ಯವಾಗಿಡಲಾಗುತ್ತದೆ ತಿಳಿಸಿದ್ದಾರೆ.
ಇನ್ನು ಒಂದು ವೇಳೆ ಸುಳಿವು ಸಿಕ್ಕರೆ ಮಾಹಿತಿದಾರರು 080289510999 ಮತ್ತು 8904241100 ಈ ನಂಬರ್ ಗಳಿಗೆ ತಿಳಿಸಬೇಕು ಎಂದು ಹೇಳಿದ್ದಾರೆ.
Next Article