ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಗೆ ಟಿಕೆಟ್ ತಪ್ಪಿಸಲು ನಾನು ಕಾರಣನಲ್ಲ.!

05:44 PM Mar 17, 2024 IST | Bcsuddi
Advertisement

 

Advertisement

 

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ಗೆ ಲೋಕಸಭಾ ಟಿಕೆಟ್ ಕೈ ತಪ್ಪಲು ನಾನು ಕಾರಣವಲ್ಲ. ಎಂದು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಈಶ್ವರಪ್ಪ ಅವರು, ನನ್ನ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ. ಸಿಟ್ಟಿನಲ್ಲಿ ಹಾಗೆ ಮಾತನಾಡಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯ ತೀರ್ಮಾನದಂತೆ ಟಿಕೆಟ್ ಹಂಚಿಕೆಯಾಗಿದೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರಲಿದ್ದಾರೆ ಎಂಬ ವಿಶ್ವಾಸವಿದೆ. ಅವರೂ ಕೂಡ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಎಲ್ಲವೂ ಸರಿ ಹೋಗುತ್ತದೆ ಎಂದುಕೊಂಡಿದ್ದೇನೆ. ಅವರ ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಅವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ. ಅವರನ್ನು ಮತ್ತೆ ಕರೆತರುವ ಪ್ರಯತ್ನ ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ನನ್ನ ವಿರುದ್ಧ ತಪ್ಪು ಗ್ರಹಿಕೆ ಬೇಡ ಎಂದರು.

Tags :
ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಗೆ ಟಿಕೆಟ್ ತಪ್ಪಿಸಲು ನಾನು ಕಾರಣನಲ್ಲ.!
Advertisement
Next Article