ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರೈತರ ಸಾಲಮನ್ನಾ ಮಾಡಲಿದೆ'- ಸಿಎಂ ಸಿದ್ದರಾಮಯ್ಯ

04:01 PM May 11, 2024 IST | Bcsuddi
Advertisement

ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ರೈತರ ಸಾಲಮನ್ನಾ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಇತ್ತೀಚೆಗೆ ನಿಧನರಾದ ವಿ ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಸುದ್ದಿಗಾರರೊಂದಿಗೆ ಸಾಲಮನ್ನಾ ಮಾಡುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮಾಡುವ ಪ್ರಸ್ತಾಪಕ್ಕೆ ಅವರು ಸರ್ಕಾರದ ಬಳಿ ನೋಟು ಮುದ್ರಿಸುವ ಮಶೀನ್ ಇದೆಯಾ? ಅಂತ ಹೇಳಿದ್ದರು. ಈಗ ಅದ್ಯಾವ ನೈತಿಕತೆಯೊಂದಿಗೆ ಅವರು ರೈತರ ಸಾಲಮಾಡಿ ಅನ್ನುತ್ತಾರೆ. ರೈತರ ಸಾಲ ಮನ್ನ ಮಾಡುವಂತೆ ಹೇಳುವ ನೈತಿಕತೆ ಅವರಿಗಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಲು ಮುಂದಾಗಬೇಕು ಎಂದು ಯಡಿಯೂರಪ್ಪ ಅವರು ಹೇಳಿದ್ದರು. ಇದೀಗ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 

Advertisement
Next Article