For the best experience, open
https://m.bcsuddi.com
on your mobile browser.
Advertisement

ಕೇಂದ್ರದ ಪೂರ್ವ ಬಜೆಟ್ ಸಭೆಯಲ್ಲಿ ಭಾಗಿಯಾಗಲು ಸಿಎಂಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಪತ್ರ

01:03 PM Jun 19, 2024 IST | Bcsuddi
ಕೇಂದ್ರದ ಪೂರ್ವ ಬಜೆಟ್ ಸಭೆಯಲ್ಲಿ ಭಾಗಿಯಾಗಲು ಸಿಎಂಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಪತ್ರ
Advertisement

ಬೆಂಗಳೂರು :ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್‌ ಅನ್ನು ಜುಲೈನಲ್ಲಿ ಮಂಡಿಸಲಿದ್ದಾರೆ.

ಈ ಬೆನ್ನಲ್ಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತ್ರ ಬರೆದು ಕೇಂದ್ರದ ಪೂರ್ವ ಬಜೆಟ್ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ.

ಜೂ.22ರಂದು ದೆಹಲಿಯಲ್ಲಿ ನಡೆಯುವ ಪ್ರೀ ಬಜೆಟ್ ಸಭೆಯಲ್ಲಿ ರಾಜ್ಯದ ಪರ ಭಾಗವಹಿಸಲು ಸಿಎಂಗೆ ಆಹ್ವಾನ ನೀಡಲಾಗಿದ್ದು ನಿರ್ಮಲಾ ಸೀತಾರಾಮನ್ ಪತ್ರಕ್ಕೆ ಸಿಎಂ ಸಹ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಜೂ.22ರಂದು ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿದೆ. ಹಾಗಾಗಿ ನಾನು ಮೀಟಿಂಗ್​​ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ನನ್ಮ ಬದಲು ನನ್ನ ಸಂಪುಟದ ಸಹೋದ್ಯೋಗಿ ಸಚಿವ ಕೃಷ್ಣಭೈರೇಗೌಡ ಭಾಗಿ ಆಗ್ತಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಕ್ಕೆ ಸಿಎಂ ಉತ್ತರ ನೀಡಿದ್ದಾರೆ

Author Image

Advertisement