For the best experience, open
https://m.bcsuddi.com
on your mobile browser.
Advertisement

ಕೇಂದ್ರ ಸಚಿವ ಹೆಚ್‌ಡಿಕೆ ಮೊದಲ ಕಡತಕ್ಕೆ ವಿಘ್ನ - ದೇದಾರಿ ಮೈನಿಂಗ್‌ಗೆ ರಾಜ್ಯ ಸರ್ಕಾರ ಬ್ರೇಕ್‌

04:26 PM Jun 23, 2024 IST | Bcsuddi
ಕೇಂದ್ರ ಸಚಿವ ಹೆಚ್‌ಡಿಕೆ ಮೊದಲ ಕಡತಕ್ಕೆ ವಿಘ್ನ   ದೇದಾರಿ ಮೈನಿಂಗ್‌ಗೆ ರಾಜ್ಯ ಸರ್ಕಾರ ಬ್ರೇಕ್‌
Advertisement

ಬೆಂಗಳೂರು ; ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲಿಗೆ ಸಹಿ ಹಾಕಿದ್ದ ರಾಜ್ಯಕ್ಕೆ ಸಂಬಂಧಿಸಿದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಗಣಿಗಾರಿಕೆಗೆ ಸಂಬಂಧಿಸಿದ ಯೋಜನೆಗೆ ರಾಜ್ಯ ಸರ್ಕಾರ ತಡೆ ನೀಡಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ ಉಂಟಾಗಿದ್ದು, ದೇದಾರಿ ಮೈನಿಂಗ್‌ ಗೆ ರಾಜ್ಯ ಸರ್ಕಾರ ಬ್ರೇಕ್‌ ಹಾಕಿದೆ.

ಸಂಡೂರು ತಾಲೂಕಿನ ದೇವದಾರಿ ಹಿಲ್‌ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ ಗಣಿಗಾರಿಕೆ ನಡೆಸಲು ಅವಕಾಶ ಕಲ್ಪಿಸುವ ಸಂಬಂಧದ ಅರಣ್ಯ ತೀರುವಳಿ ಗುತ್ತಿಗೆ ಪತ್ರ ತಡೆಹಿಡಿಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement
Author Image

Advertisement