For the best experience, open
https://m.bcsuddi.com
on your mobile browser.
Advertisement

ಕೇಜ್ರಿವಾಲ್‌ಗೆ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ- ಆರೋಪಿ ಬಂಧನ

12:31 PM May 22, 2024 IST | Bcsuddi
ಕೇಜ್ರಿವಾಲ್‌ಗೆ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ  ಆರೋಪಿ ಬಂಧನ
Advertisement

ನವದೆಹಲಿ: ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊಲೆ ಬೆದರಿಕೆ ಸಂದೇಶ ಬರೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಆರೋಪಿ 33 ವರ್ಷದ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ. ಈತ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆದಿದ್ದನು. ಅಂಕಿತ್‌ ಕೃತ್ಯ ಮೆಟ್ರೋ ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಾಕ್ಷಿ ಆಧರಿಸಿ ದೆಹಲಿ ಪೊಲೀಸರು ಬಂಧಿಸಿದ್ದು, ಮೆಟ್ರೋ ಘಟಕವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂದು ತೋರುತ್ತದೆ, ಆದರೆ ವೈದ್ಯಕೀಯ ಪರೀಕ್ಷೆಯ ನಂತರವೇ ಇದನ್ನು ಖಚಿತಪಡಿಸಬಹುದಾಗಿದೆ ಎನ್ನಲಾಗಿದೆ.

Advertisement

Author Image

Advertisement