For the best experience, open
https://m.bcsuddi.com
on your mobile browser.
Advertisement

ಕೇಜ್ರಿವಾಲ್ ಅರ್ಜಿಯ ಮೇರೆಗೆ ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

06:15 PM Jul 02, 2024 IST | Bcsuddi
ಕೇಜ್ರಿವಾಲ್ ಅರ್ಜಿಯ ಮೇರೆಗೆ ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌
Advertisement

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿಗೊಳಿಸಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಕೇಜ್ರಿವಾಲ್ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ಮೇರೆಗೆ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ಇಂದು ಪ್ರಕರಣದ ವಿಚಾರಣೆ ನಡೆಸಿದೆ. ವಿಚಾರಣೆ ಬಳಿಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ.

ಸಿಬಿಐನ ಬಂಧನ ಮತ್ತು ರಿಮಾಂಡ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ವಾದ ಮಂಡಿಸಿದ ಕೇಜ್ರಿವಾಲ್ ಪರ ವಕೀಲರು, ಬಂಧನದ ಅವಶ್ಯಕತೆ ಏನು? ಸಿಬಿಐ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಬಂಧಿಸುವ ಪ್ರಶ್ನೆಯೇ ಇಲ್ಲ. 2022 ರ ಎಫ್‌ಐಆರ್ ಅನ್ನು ಏಪ್ರಿಲ್ 2023 ರಲ್ಲಿ ವಿಚಾರಣೆ ನಡೆಸಲಾಯಿತು ಮತ್ತು ಈಗ 2024 ರ ಜೂನ್‌ನಲ್ಲಿ ಬಂಧಿಸಲಾಗಿದೆ. ಏಜೆನ್ಸಿಗೆ ಕೆಲವು ಕಾರಣವಿರಬೇಕು ಅಥವಾ ಬಂಧನಕ್ಕೆ ಆಧಾರವಾಗಿ ಕೇಜ್ರಿವಾಲ್ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದರು ಎಂದು ವಾದಿಸಿದ್ದಾರೆ‌.

Advertisement

ನೀವು ಬಂಧನವನ್ನು ರದ್ದುಪಡಿಸಲು ಮತ್ತು ಕಸ್ಟಡಿಯಿಂದ ಬಿಡುಗಡೆ ಮಾಡಲು ಒತ್ತಾಯಿಸುತ್ತಿದ್ದೀರಿ ಎಂದು ವಕೀಲರಿಗೆ ಹೇಳಿದ ನ್ಯಾಯಾಲಯವು, ಕೇಜ್ರಿವಾಲ್ ಅವರ ಅರ್ಜಿಯ ಮೇಲೆ ಕೋರ್ಟ್ ನೋಟಿಸ್ ಜಾರಿಗೊಳಿಸಿ ಸಿಬಿಐಗೆ ನಿರ್ದೇಶಿಸಿತು. ‌ ಪ್ರಕರಣದ ಮುಂದಿನ ವಿಚಾರಣೆ ಜುಲೈ 17 ರಂದು ನಡೆಯಲಿದೆ. ಜೂನ್ 29 ರಂದು, ಎಎಪಿ ಮುಖ್ಯಸ್ಥರನ್ನು ಸಿಟಿ ಕೋರ್ಟ್‌ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತೀರ್ಪು ನೀಡಿದೆ.

Author Image

Advertisement