ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕೇಸರಿ ಶಾಲು ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ ಯುವಕ - ಗಣ್ಯರು ಆತಂಕ

12:24 PM Sep 15, 2024 IST | BC Suddi
Advertisement

ಬೆಂಗಳೂರು :ವಿಧಾನಸೌಧದ ಮುಂದೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ವೇದಿಕೆ ಮೇಲೆ ಕೇಸರಿ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ ಘಟನೆ ನಡೆದಿದೆ.

Advertisement

ಕಾರ್ಯಕ್ರಮದಲ್ಲಿ ವೇದಿಕೆ ಮೇಲ್ಭಾಗಕ್ಕೆ ಯುವಕ ಜಂಪ್ ಮಾಡಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ. ಸಿಎಂ ಅಂಗರಕ್ಷಕರು ಕೂಡಲೇ ಆ ಯುವಕನನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಕಂಡುಬಂದಿದೆ ಎಂದು ಹೇಳಲಾಗಿದೆ.

ವಶಕ್ಕೆ ಪಡೆದರೂ ಯುವಕ ಸಿಎಂ ಕಡೆ ಶಾಲು ಎಸೆದಿದ್ದಾನೆ. ಈ ರೀತಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article