For the best experience, open
https://m.bcsuddi.com
on your mobile browser.
Advertisement

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ನೀಡಿದ್ರು ಸಚಿವ ಬಿ.ನಾಗೇಂದ್ರ.!

07:51 AM Jan 07, 2024 IST | Bcsuddi
ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ನೀಡಿದ್ರು ಸಚಿವ ಬಿ ನಾಗೇಂದ್ರ
Advertisement

ಬಳ್ಳಾರಿ: ರಾಜ್ಯದ ಕ್ರೀಡಾಪಟುಗಳಿಗೆ ಎಲ್ಲ ಇಲಾಖೆಗಳಲ್ಲಿಯೂ ಶೇ 2ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ತಿಳಿಸಿದರು.

ನಗರದ ವಾಲ್ಮೀಕಿ ಭವನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ರಾಜ್ಯಮಟ್ಟದ ಯುವ ಜನೋತ್ಸವದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರೀಡಾ ಹಾಸ್ಟೆಲ್, ಸುಸಜ್ಜಿತ ಜಿಮ್ ನಿರ್ಮಾಣ ಮಾಡಲಾಗುವುದು ಎಂದರು.

Advertisement

ಯುವಕರು ತಮ್ಮ ಜೀವನದಲ್ಲಿ ಸಂಕಲ್ಪ ಇಟ್ಟುಕೊಳ್ಳಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

Tags :
Author Image

Advertisement