ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗಂಧದ ನಾಡನ್ನು ಕಾಂಗ್ರೆಸ್ ಗಾಂಜಾ ನಾಡಾಗಿ ಪರಿವರ್ತಿಸುತ್ತಿರುವುದು ಖೇದಕರ- ಬಿಜೆಪಿ

05:16 PM May 25, 2024 IST | Bcsuddi
Advertisement

ಬೆಂಗಳೂರು: ಗಂಧದ ನಾಡು ಎಂಬ ಪ್ರಖ್ಯಾತಿ ಹೊಂದಿದ್ದ ಕರುನಾಡನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಗಾಂಜಾ ನಾಡಾಗಿ ಪರಿವರ್ತಿಸುತ್ತಿರುವುದು ಖೇದಕರ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Advertisement

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿರುವ ಬಿಜೆಪಿ ನಮ್ಮ ಆಡಳಿತಾವಧಿಯಲ್ಲಿ ಗಂಧದ ನಾಡಾಗಿದ್ದ ಕರ್ನಾಟಕವನ್ನು ಈಗ ಕಾಂಗ್ರೆಸ್ ಗಾಂಜಾ ನಾಡಾಗಿ ಮಾಡುತ್ತಿದೆ. ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮಾಮೂಲಿಯಾಗಿದೆ. ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಎಂದು ಬರೆದುಕೊಂಡಿದೆ.

ರಾಜಧಾನಿ ಬೆಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ನಿರ್ಭೀತಿಯಿಂದ ಗಾಂಜಾ, ಕೊಕೇನ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ. ಹೊರ ರಾಜ್ಯದ ವ್ಯಸನಿಯರು ಭಾಗವಹಿಸುತ್ತಿದ್ದಾರೆ. ಮಲಗಿರುವ ಕಾಂಗ್ರೆಸ್ ಸರ್ಕಾರ ಕೂಡಲೇ ಎಚ್ಚೆತ್ತು ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಬಿಜೆಪಿ ಕಿಡಿಕಾರಿದೆ.

 

Advertisement
Next Article