ಗಣರಾಜ್ಯೋತ್ಸವ ಆಚರಣೆಯಲ್ಲಿ ಫೈರಿಂಗ್ - ಗ್ರಾ.ಪಂಚಾಯತ್ ಅಧ್ಯಕ್ಷೆಗೆ ಗಾಯ
04:37 PM Jan 26, 2024 IST | Bcsuddi
Advertisement
ವಿಜಯಪುರ: ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯಗೊಂಡಿರುವ ಘಟನೆ ನಡೆದಿದೆ.
ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.
ಇನ್ನು ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆಗೆ ತಾಗಿದ್ದು ಗಾಯಗೊಂಡಿದ್ದಾರೆ.
Advertisement
ಹಿರೇರೂಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.