For the best experience, open
https://m.bcsuddi.com
on your mobile browser.
Advertisement

ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ.!

08:15 AM Sep 08, 2024 IST | BC Suddi
ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ
Advertisement

ಭದ್ರಾವತಿ : ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೋಲಿಸ್ ಸೇರಿದಂತೆ ಐವರು ಗಾಯಗೊಂಡಿರುವ ಘಟನೆ  ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ನಡೆದಿದೆ.

ಶನಿವಾರ ಸಂಜೆ ಗಣಪತಿ ಹಬ್ಬದ ವೇಳೆ ಡೊಳ್ಳು ಬಾರಿಸುವ ತಂಡವನ್ನು ಬುಕ್ ಮಾಡಿದ್ದ ಎರಡು ಯುವಕರ ಸಂಘಗಳ ಮಧ್ಯೆ ಗಲಾಟೆ ನಡೆದಿದೆ. ಒಂದೇ ಸಮಯಕ್ಕೆ ಗಣಪತಿ ಮೆರವಣಿಗೆ ಹಮ್ಮಿಕೊಂಡಿದ್ದು, ಡೊಳ್ಳು ಬಾರಿಸುವ ತಂಡ ಬರುವುದು ವಿಳಂಬವಾಗಿದ್ದರಿಂದ ಗಲಾಟೆ ನಡೆದಿದೆ.

Advertisement

ಕಲ್ಲು, ದೊಣ್ಣೆಗಳಿಂದ ಯುವಕರು ಹೊಡೆದಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಲಾಟೆ ತಡೆಯಲು ಯತ್ನಿಸಿದ್ದಾರೆ. ಕಲ್ಲು ತೂರಾಟದಲ್ಲಿ ಪೊಲೀಸ್ ಒಬ್ಬರು ಗಾಯಗೊಂಡಿದ್ದು, ನಾಲ್ವರು ಯುವಕರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Tags :
Author Image

Advertisement