ಗುಡ್ ನ್ಯೂಸ್: ಪಡಿತರದಾರರಿಗೆ ಇನ್ನು ರಾಗಿ, ಗೋಧಿ ಒಳಗೊಂಡ ಕಿಟ್..!
12:36 PM Sep 05, 2024 IST | BC Suddi
Advertisement
ಪಡಿತರದಾರರಿಗೆ ಹೆಚ್ಚುವರಿ 5kg ಅಕ್ಕಿಗೆ ಪರ್ಯಾಯವಾಗಿ ನೇರ ನಗದು ವರ್ಗಾವಣೆ ವ್ಯವಸ್ಥೆ ಬದಲು ಆಹಾರ ಕಿಟ್ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು. ನಡೆಯುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರವಾಗುವ
ಸಾಧ್ಯತೆಯಿದೆ.
ಅನ್ನಭಾಗ್ಯ ಯೋಜನೆಯಡಿ 10 kg ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಮೊದಲಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆಗೆ ಒಪ್ಪಿಗೆ ನೀಡದ ಕಾರಣ ಕಾರ್ಡ್ದಾರರಿಗೆ ಹೆಚ್ಚುವರಿ ಅಕ್ಕಿ ಬೆಲೆಯಷ್ಟು ಹಣ
ನೀಡಲಾಗುತ್ತಿತ್ತು. ಈಗ ರಾಗಿ, ಗೋಧಿ, ಎಣ್ಣೆ ಸೇರಿ 5 kg ಆಹಾರ ಧಾನ್ಯ ನೀಡಲು ನಿರ್ಧರಿಸಲಾಗಿದೆ.
Advertisement
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.