For the best experience, open
https://m.bcsuddi.com
on your mobile browser.
Advertisement

ಗೌರಿ ಲಂಕೇಶ್ ಹತ್ಯೆ ಪ್ರಕರಣ - ಆರೋಪಿಗೆ ಜಾಮೀನು ಎತ್ತಿ ಹಿಡಿದ ಸುಪ್ರೀಮ್ ಕೋರ್ಟ್

09:30 AM Aug 23, 2024 IST | BC Suddi
ಗೌರಿ ಲಂಕೇಶ್ ಹತ್ಯೆ ಪ್ರಕರಣ   ಆರೋಪಿಗೆ ಜಾಮೀನು ಎತ್ತಿ ಹಿಡಿದ ಸುಪ್ರೀಮ್ ಕೋರ್ಟ್
Advertisement

ನವದೆಹಲಿ: 2017ರಲ್ಲಿ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್‌ ಅವರನ್ನು ಕೊಲೆಗೈದ ಪ್ರಕರಣದ ಆರೋಪಿ ಮೋಹನ್‌ ಎನ್‌ ನಾಯಕ್‌ಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಗುರುವಾರ (ಆಗಸ್ಟ್ 22) ವಜಾಗೊಳಿಸಿದೆ. ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠದ ಜಸ್ಟೀಸ್‌ ಬೇಲಾ ಎಂ ತ್ರಿವೇದಿ ಮತ್ತು ಜಸ್ಟೀಸ್‌ ಸತೀಶ್‌ ಚಂದ್ರ ಶರ್ಮಾ , ಮೋಹನ್‌ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ನಿರಾಕರಿಸಿದ್ದು, ವಿಚಾರಣೆಗೆ ನಾಯಕ್‌ ಸಹಕರಿಸುತ್ತಿದ್ದು, ಈವರೆಗೂ ಯಾವುದೇ ವಿಚಾರಣೆ ಮುಂದೂಡಿಕೆಗೆ ಮನವಿ ಮಾಡಿಲ್ಲ. ನಾಯಕ್‌ 2018ರ ಜುಲೈ 18ರಿಂದ ಬಂಧನದಲ್ಲಿರುವುದಾಗಿ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Author Image

Advertisement