ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರು

01:01 PM Oct 23, 2024 IST | BC Suddi
Advertisement

ಮುಂಬೈ : ಹೋಟೆಲ್ ಉದ್ಯಮಿ ಜಯ್‌ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ.

Advertisement

2001ರಲ್ಲಿ ಉದ್ಯಮಿ ಜಯ್‌ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಛೋಟಾ ರಾಜನ್ ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಛೋಟಾ ರಾಜನ್ ಅರ್ಜಿ ಸಲ್ಲಿಸಿದ್ದ.

ಇದೀಗ ಛೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ 1 ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಿದೆ. ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಚೋಟಾ ರಾಜನ್ ಉಳಿದ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

 

Advertisement
Next Article