ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್.!
07:36 AM Mar 01, 2024 IST | Bcsuddi
Advertisement
ಕಲಬುರಗಿ : ಪ್ರಚೋದನಾಕಾರಿ ಭಾಷಣ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡುತ್ತಾರೆಂದು ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕಲ್ಬುರ್ಗಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾ ಆಡಳಿತ ಆದೇಶ ಹೊರಡಿಸಿತು.
Advertisement
ಆದರೆ ಈ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಚಕ್ರವರ್ತಿ ಸೂಲಿಬೆಲೆಗೆ ಹೈಕೋರ್ಟ್ ಅವಕಾಶ ನೀಡಿದೆ.!
ಚಿತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೆಗೊಂಡಿತ್ತು.ಕಲಬುರಗಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಸೂಲಿಬೆಲೆಗೆ ಕಲಬುರಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು.
ಅದರಂತೆ ಜಿಲ್ಲಾ ಪೊಲೀಸರು ಭಾಲ್ಕಿಯಿಂದ ಕಲಬುರಗಿಗೆ ಆಗಮಿಸುತ್ತಿದ್ದ ಚಕ್ರವರ್ತಿ ಸೂಲಿಬಲೆ ಅವರನ್ನು ಕಮಲಾಪುರ ಬಳಿಯೇ ವಶಕ್ಕೆ ಪಡೆದು ಹಳ್ಳಿಖೇಡ ಊರಲ್ಲಿ ರಾತ್ರಿ ತಂಗುವಂತೆ ಮಾಡಿದ್ದರು. ಇದರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು.