ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಾರ್ಜ್​ಶೀಟ್​ ಸಲ್ಲಿಕೆ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಜತೆ ದರ್ಶನ್ ಪೋನ್‌ ಸಂಭಾಷಣೆ..!

12:22 PM Sep 05, 2024 IST | BC Suddi
Advertisement

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಕೇಸ್‌ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸುತ್ತಿದ್ದಂತೆ ಇತ್ತ ದರ್ಶನ್​ಗೆ ಟೆನ್ಷನ್​ ಹೆಚ್ಚಾಗಿದೆ. ಇದರ ನಡುವೆಯೇ ಪತ್ನಿ ವಿಜಯಲಕ್ಷ್ಮಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪ್ರಿಸನ್ ಕಾಲ್ ಸಿಸ್ಟಮ್​ನಲ್ಲಿ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮಿ ಅವರ ನಂಬರ್​ಅನ್ನು ಸೇವ್​ ಮಾಡಲಾಗಿದ್ದು, ಐದು ನಿಮಿಷಗಳ ಕಾಲ ಪತ್ನಿಯೊಂದಿಗೆ ದರ್ಶನ್​ ಮಾತುಕತೆ ನಡೆಸಿದ್ದಾರೆ. ಮಧ್ಯಾಹ್ನ 2:30ರ ಸುಮಾರಿಗೆ ಪತ್ನಿಗೆ ಕರೆ ಮಾಡಿದ ದರ್ಶನ್​ ಚಾರ್ಜ್​ಶೀಟ್​ ಸಲ್ಲಿಕೆ ಮತ್ತು ಇಂದಿನ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದ್ದಾರೆ. ಆ ವೇಳೆ ಪತಿಯ ಆರೋಗ್ಯವನ್ನು ವಿಜಯಲಕ್ಷ್ಮಿ ವಿಚಾರಿಸಿದ್ದು, ಈ ವೇಳೆ ಭಾವುಕರಾಗಿದ್ದಾರೆ. ದರ್ಶನ್​ ಹಾಗೂ ವಿಜಯಲಕ್ಷ್ಮಿ ನಡುವಿನ ಸಂಭಾಷಣೆಯನ್ನು ನಿಯಮದ ಪ್ರಕಾರ ಜೈಲಧಿಕಾರಿಗಳು ರೆಕಾರ್ಡ್​ ಮಾಡಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆದ ಆರೋಪದ ಮೇಲೆ ನಟ ದರ್ಶನ್​ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಸ್ಥಳಾಂತರಿಸಲಾಗಿದೆ.

Advertisement

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article