ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚಾರ್ಮಾಡಿಯಲ್ಲಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್‌ ಲಾರಿ- ತಪ್ಪಿದ ಅನಾಹುತ

11:18 AM Jan 13, 2024 IST | Bcsuddi
Advertisement

ಕೊಟ್ಟಿಗೆಹಾರ: ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

Advertisement

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದೆ. ತಕ್ಷಣ ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ
ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Advertisement
Next Article