ಚುನಾವಣಾ ಕರ್ತವ್ಯದಲ್ಲಿದ್ದ ಹೃದಯಾಘಾತದಿಂದ ಅಧಿಕಾರಿ ಸಾವು
06:02 PM May 06, 2024 IST | Bcsuddi
Advertisement
ಬೀದರ್: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.
ಆನಂದ್(31) ಮೃತ ಸಹಾಯಕ ಕೃಷಿ ಅಧಿಕಾರಿ. ಕೋಡಂಬಲ್ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯಸಿರೆಳೆದಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. 174 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ.
Advertisement