ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆ

03:58 PM Jan 03, 2024 IST | Bcsuddi
Advertisement

ಬೆಂಗಳೂರು: ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ವಿಡೀಯೋವೊಂದನ್ನು ಎಕ್ಸ್​ನಲ್ಲಿ ಹಂಚಿಕೊಂಡಿರುವ ಕುಮಾರಸ್ವಾಮಿ, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆಂದು ಹೊರಟ ಕಾಂಗ್ರೆಸ್ ಪಕ್ಷದ ಸರ್ಕಾರ ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನು ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದಿದ್ದಾರೆ.

ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲ ಎನ್ನುವ ವರದಿ ಆಘಾತಕಾರಿ. ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು. ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕದ ಮಾದರಿ! ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Next Article