ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದು ಹೀಗೆ.!
07:20 AM Apr 03, 2024 IST | Bcsuddi
Advertisement
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.
ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಲ್ಹಾದ ಜೋಶಿ ಅವರಿಗರ ಧಾರವಾಡ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಿಸಿರುವುದನ್ನು ಬದಲಾವಣೆ ಮಾಡಬೇಕು ಎಂದು ಕೇಳಿದ್ದೆ. ಅವರನ್ನು ಬದಲಾವಣೆ ಮಾಡುವುದಿಲ್ಲ ಎಂದು ಪಕ್ಷದವರು ಹೇಳಿದ್ದಾರೆ. ಹೀಗಾಗಿ, ಹೋರಾಟಕ್ಕೆ ಮುಂದಾಗಿದ್ದೇನೆ. ಮುಂದಿಟ್ಟ ಹೆಜ್ಜೆ ಹಿಂದಿಡಬೇಡಿ ಎಂದು ಭಕ್ತರು ಸಲಹೆ ನೀಡಿದ್ದಾರೆ ಎಂದರು.
Advertisement
ಹೋರಾಟ ಕೈಬಿಡಲ್ಲ, ಒತ್ತಡಕ್ಕೆ ಮಣಿಯಲ್ಲ, ಆಮಿಷಕ್ಕೆ ಬಗ್ಗಲ್ಲ. ನಮ್ಮ ಹೋರಾಟ ಬಿಜೆಪಿ ವಿರುದ್ಧ ಅಲ್ಲ. ಇದು ಜೋಶಿ ಅವರ ವ್ಯಕ್ತಿತ್ವ, ನಡೆ-ನುಡಿ ವಿರುದ್ಧದ ಹೋರಾಟ ಎಂದು ಉತ್ತರಿಸಿದರು. ಬೆಂಗಳೂರಿನಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದರು.