ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿ ಮೇಲೆ ಹಲ್ಲೆ ಆರೋಪ

06:58 PM Mar 27, 2024 IST | Bcsuddi
Advertisement

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ಪ್ರಕರಣದ ಪ್ರಮುಖ ಆರೋಪಿ ಧನರಾಜ್, ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ, ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

Advertisement

ರಾಮು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ದೂರು ನೀಡಿದರೂ ಕೂಡ ಬೀರೂರು ಠಾಣೆಯ ಪೊಲೀಸರು ಮಾತ್ರ ಪ್ರಕರಣ ದಾಖಲಿಸಿಲ್ಲ. ಈ ಹಿನ್ನೆಲೆ ನ್ಯಾಯಕ್ಕಾಗಿ ರಾಮು ಕುಟುಂಬ ಎಸ್ಪಿ ಕಚೇರಿ ಮೊರೆ ಹೋಗಿದ್ದಾರೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಗೋಪಾಲ್ ಜೀ ಪಾತ್ರ ಸೃಷ್ಟಿಸಿ ಕಡೂರಿನ ರಾಮು ಸಲೂನ್ನಲ್ಲಿ ಚೆನ್ನಾ ನಾಯ್ಕಗೆ ಧನರಾಜ್ ಮೇಕಪ್ ಮಾಡಿಸಿದ್ದ. ಈ ಹಿನ್ನೆಲೆಯಲ್ಲಿ ರಾಮು ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾರೆ. ಆದ್ದರಿಂದಲೇ ಧನರಾಜ್ ರಾಮುವಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ.

ಪ್ರಕರಣ ದಾಖಲಿಸದ ಬೀರೂರು ಪೊಲೀಸರ ವಿರುದ್ಧ ರಾಮು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.

ಸೋಮವಾರ(ಮಾ.25) ಕಡೂರಿನ ಹೋಟೆಲ್ ನಲ್ಲಿ ಹಲ್ಲೆ ನಡೆದಿರುವ ಸಂಬಂಧ ರಾಮು ಅವರು ಬೀರೂರು ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ತಿಂಗಳು ಧನರಾಜ್‌ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.

Advertisement
Next Article