For the best experience, open
https://m.bcsuddi.com
on your mobile browser.
Advertisement

'ಜನರು ಪ್ರಧಾನಿ ಮೋದಿಯನ್ನು ಕೈಬಿಡಲು ನಿರ್ಧರಿಸಿದ್ದಾರೆ'- ಮಲ್ಲಿಕಾರ್ಜುನ ಖರ್ಗೆ

05:46 PM May 15, 2024 IST | Bcsuddi
 ಜನರು ಪ್ರಧಾನಿ ಮೋದಿಯನ್ನು ಕೈಬಿಡಲು ನಿರ್ಧರಿಸಿದ್ದಾರೆ   ಮಲ್ಲಿಕಾರ್ಜುನ ಖರ್ಗೆ
Advertisement

ನವದೆಹಲಿ: ನಾಲ್ಕು ಹಂತಗಳ ಚುನಾವಣೆ ಪೂರ್ಣಗೊಂಡಿದೆ. ಭಾರತ ಮೈತ್ರಿ ಗಟ್ಟಿಯಾಗಿದ್ದು, ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೈಬಿಡಲು ನಿರ್ಧಾರ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲಕ್ನೋದಲ್ಲಿ ಅಖಿಲೇಶ್ ಯಾದವ್ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 4 ರಂದು ಭಾರತ ಮೈತ್ರಿಕೂಟ ಸರ್ಕಾರ ರಚಿಸಲಿದೆ. ಪ್ರಧಾನಿ ಮೋದಿ ಅವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ಸಿದ್ಧರಾಗಿದ್ದಾರೆ. ಸಂವಿಧಾನವನ್ನು ರಕ್ಷಣೆಗೆ ಚುನಾವಣೆ ಮುಖ್ಯ. ದೇಶದ ಭವಿಷ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಾವು ಮತ್ತೆ ಗುಲಾಮರಾಗುತ್ತೇವೆ ಎಂದರು.

ಪ್ರಜಾಪ್ರಭುತ್ವವಲ್ಲ, ನಿರಂಕುಶಾಧಿಕಾರ ಮತ್ತು ಸರ್ವಾಧಿಕಾರ ಇದ್ದರೆ ಹೇಗೆ? ವಿರೋಧ ಪಕ್ಷದ ನಾಯಕರನ್ನು ನಾಮಪತ್ರ ಸಲ್ಲಿಸದಂತೆ ತಡೆಯಲಾಗುತ್ತಿದೆ. ಹೈದರಾಬಾದ್‌ನಲ್ಲಿ ಬಿಜೆಪಿಯ ಮಹಿಳಾ ಅಭ್ಯರ್ಥಿಯೊಬ್ಬರು ಬುರ್ಖಾ ತೊಟ್ಟ ಮಹಿಳೆಯರ ಗುರುತು ಪರಿಶೀಲನೆ ಮಾಡುವುದನ್ನು ನೋಡಿದ್ದೇವೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯುವುದೆಂದರೆ ಹೀಗೇನಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Advertisement

Author Image

Advertisement