ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಸ್ತಾಪ ಖಂಡನೀಯ'- ಬಸವರಾಜ ಬೊಮ್ಮಾಯಿ

05:38 PM Dec 23, 2023 IST | Bcsuddi
Advertisement

ಬೆಂಗಳೂರು: ರಾಜ್ಯ ಸರ್ಕಾರ ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹಿಜಾಬ್ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆಯ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಪ್ರಶ್ನಿಸಿದರು.

ಸಮಗ್ರ ಶಿಕ್ಷಣ ಕಾಯ್ದೆ ಅನ್ವಯ ಶಾಲಾ ಸಮವಸ್ತ್ರ ಜಾರಿಗೆ ಬಂತು. ಮುಖ್ಯಮಂತ್ರಿಗಳು ಅದನ್ನು ಹಿಂಪಡೆಯುವ ಮಾತಾಡಿದ್ದಾರೆ. ಹಿಜಾಬ್ ಪ್ರಕರಣ ಈಗಾಗಲೇ ಕೊರ್ಟ್ ನಲ್ಲಿದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿರುವುದು ಖಂಡನೀಯ ಎಂದರು.

Advertisement
Next Article