'ಜನ ಏನು ತೀರ್ಪು ನೀಡಬೇಕೋ ನೀಡಿದ್ದಾರೆ, ನಮಗೆ ಮಾಡಲು ಕೆಲಸ ಇದೆ': ಡಿಸಿಎಂ
06:03 PM Oct 30, 2023 IST
|
Bcsuddi
Advertisement
ಬೆಂಗಳೂರು: "ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
Advertisement
ಕುಮಾರಕೃಪಾ ಅತಿಥಿ ಗೃಹದ ಬಳಿ ಸೋಮವಾರ ಮಾಧ್ಯಮಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದರು.
'ಬಿಜೆಪಿ ಆಪರೇಷನ್ ಮಾಡಿರಲಿಲ್ಲ. ಮೈತ್ರಿ ಸರ್ಕಾರ ಕೆಡವಿದ್ದೇ ನಾವು. ಈಗ ಬಿಜೆಪಿ ಆಪರೇಶನ್ ಕಮಲ ಮಾಡುತ್ತಿದೆ ಎಂಬುದು ಶಿವಕುಮಾರ್ ಕೃಪಾಪೋಷಿತ ನಾಟಕ ಮಂಡಳಿಯ ಸೃಷ್ಟಿ ಎಂಬ ರಮೇಶ್ ಜಾರಕಿಹೊಳಿ ಆರೋಪದ ಬಗ್ಗೆ ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಅಧಿಕಾರ ದೊರಕ್ಕಿದ್ದು,ರಾಜ್ಯದ ಜನತೆಗಾಗಿ ಮಾಡಲು ಅನೇಕ ಕೆಲಸಗಳಿದ್ದು ಅದನ್ನು ಮಾಡುತ್ತಿದ್ದೇವೆ ಎಂದರು.
Next Article