For the best experience, open
https://m.bcsuddi.com
on your mobile browser.
Advertisement

ಜಮೀನು ಹಗರಣ: ಲಾಲು ಪ್ರಸಾದ್ ಯಾದವ್‌, ತೇಜಸ್ವಿಗೆ ಸಮನ್ಸ್‌ ಜಾರಿ

10:28 AM Dec 21, 2023 IST | Bcsuddi
ಜಮೀನು ಹಗರಣ  ಲಾಲು ಪ್ರಸಾದ್ ಯಾದವ್‌  ತೇಜಸ್ವಿಗೆ ಸಮನ್ಸ್‌ ಜಾರಿ
Advertisement

ನವದೆಹಲಿ: ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಜಮೀನು ಪಡೆದ ಹಗರಣಕ್ಕೆ ಸಂಬಂಧಪಟ್ಟಂತೆ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿ. 22ರಂದು ತೇಜಸ್ವಿಯಾದವ್ ಹಾಗೂ ಡಿ. 27ರಂದು ಲಾಲು ಪ್ರಸಾದ್ ಯಾದವ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಯುಪಿಎ-1 ಸರಕಾರದಲ್ಲಿ ಲಾಲು ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದ ವೇಳೆ ಹಗರಣ ನಡೆದಿದ್ದು, 2004 ರಿಂದ 2009 ರವರೆಗೆ ಭಾರತೀಯ ರೈಲ್ವೇ ಯ ವಿವಿಧ ವಲಯಗಳಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು.

Advertisement

ನೇಮಕಗೊಂಡ ಸದಸ್ಯರು ತಮ್ಮ ಜಮೀನನ್ನು ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್‌ ಯಾದವ್‌ ಅವರ ಕುಟುಂಬ ಸದಸ್ಯರಿಗೆ ಮತ್ತು ಬಂಧಿತ ಕಂಪನಿ ಇನ್ಫೋ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

Author Image

Advertisement