ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯ

02:52 PM May 19, 2024 IST | Bcsuddi
Advertisement

ಶ್ರೀನಗರ : ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಐದನೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ತಯಾರಿ ನಡೆಸಿದೆ.

Advertisement

ಮತದಾನಕ್ಕೆ ಒಂದು ದಿನ ಬಾಕಿ ಇರುವ ಸಮಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಜಮ್ಮು-ಕಾಶ್ಮೀರದ ಶೋಫಿಯಾನ್​ ಹಾಗೂ ಅನಂತ್​ ನಾಗ್​ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶೋಫಿಯಾನ್​ ಜಿಲ್ಲೆಯ ಹುರ್​ಪುರ ಗ್ರಾಮದ ಮಾಜಿ ಸರ್​ಪಂಚ್, ಬಿಜೆಪಿ ಮುಖಂಡ​ ಐಜಾಜ್​ ಅಹ್ಮದ್​ ಶೇಖ್​ರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದು, ಘಟನೆ ನಡೆದ ಪ್ರದೇಶದ ಸುತ್ತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಮೊದಲು ತೀವ್ರವಾದಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಐಜಾಜ್​ ಕಾಲಕ್ರಮೇಣ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಯಾಗಿ ಪರಿವರ್ತನೆಗೊಂಡಿದ್ದರು. ಐಜಾಜ್​ ಅವರ ಹತ್ಯೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.

Advertisement
Next Article