ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅಂದರ್.!

10:26 AM Apr 05, 2024 IST | Bcsuddi
Advertisement

ಶಿವಮೊಗ್ಗ: ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಬಂಧಿತರು ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಎಂದು ತಿಳಿದುಬಂದಿದೆ.ಇವರು ಶರಾವತಿ ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ನಾಡಬಂದೂಕಿನಿಂದ ಜಿಂಕೆ ಬೇಟೆಯಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಜಿಂಕೆ ಚರ್ಮ, ಜಿಂಕೆ ತಲೆ, ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ

Tags :
ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅಂದರ್.!
Advertisement
Next Article