ಜಿಲ್ಲಾ ಹಾಗೂ ತಾ.ಪಂ ಚುನಾವಣೆ ಬಗ್ಗೆ ಹೈಕೋರ್ಟ್ ಹೇಳಿದ್ದು ಇದು.!
09:40 AM Nov 10, 2023 IST | Bcsuddi
Advertisement
ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
4 ವಾರದೊಳಗೆ ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಪಿ.ಬಿ. ಹೊರಾಳೆ ಮತ್ತು ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚಿಸಿದೆ.
Advertisement
ಸರ್ಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೀಸಲಾತಿ ಪಟ್ಟಿ ಅಂತಿಮಗೊಳಿಸಲು 4 ವಾರ ಕಾಲಾವಕಾಶ ನೀಡುವಂತೆ ಕೋರಿದರು.