For the best experience, open
https://m.bcsuddi.com
on your mobile browser.
Advertisement

'ಟಿಕೆಟ್ ಕೊಡಲ್ಲವೆಂದು ಹೈಕಮಾಂಡ್ ಹೇಳಿತ್ತು' - ಸದಾನಂದಗೌಡ ನಿವೃತ್ತಿ ಘೋಷಣೆಗೆ ಬಿಎಸ್‌ವೈ ಪ್ರತಿಕ್ರಿಯೆ

03:17 PM Nov 09, 2023 IST | Bcsuddi
 ಟಿಕೆಟ್ ಕೊಡಲ್ಲವೆಂದು ಹೈಕಮಾಂಡ್ ಹೇಳಿತ್ತು    ಸದಾನಂದಗೌಡ ನಿವೃತ್ತಿ ಘೋಷಣೆಗೆ ಬಿಎಸ್‌ವೈ ಪ್ರತಿಕ್ರಿಯೆ
Advertisement

ಬೆಂಗಳೂರು: ಬಿಜೆಪಿ ಸರ್ಕಾರದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲೇ ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲವೆಂದು ಹೈಕಮಾಂಡ್ ನೇರವಾಗಿ ತಿಳಿಸಿತ್ತು ಎಂದು ಎಂದಿದ್ದಾರೆ.

ಸದಾನಂದ ಗೌಡರ ಬಗ್ಗೆ ರಾಜಕೀಯ ಬಗ್ಗೆ ಮಾತನಾಡಿದ ಯಡಿಯೂರಪ್ಪ ಸದಾನಂದ ಗೌಡರು ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ ಹೊರತು ಸಕ್ರಿಯ ರಾಜಕೀಯದಿಂದಲ್ಲ ಇನ್ನು ಮುಂದೆಯೂ ಅವರು ಬಿಜೆಪಿ ಪಕ್ಷದಲ್ಲಿಯೇ ಇರುತ್ತಾರೆ ಎಂದು ತಿಳಿಸಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು ಯಡಿಯೂರಪ್ಪ ಮಾಹಿತಿಯನ್ನು ನೀಡಿದರು.

Advertisement

Author Image

Advertisement