ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಟಿವಿ ಬೇಕೆಂದು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ ದರ್ಶನ್‌

06:44 PM Sep 03, 2024 IST | BC Suddi
Advertisement

ಬಳ್ಳಾರಿ: ಜೈಲಿನಲ್ಲಿ ಟಿವಿ ಸಹವಾಸವೇ ಬೇಡ ಎಂದು ಹೇಳುತ್ತಿದ್ದ ಕೊಲೆ ಆರೋಪಿ ದರ್ಶನ್‌ ಈಗ ಟಿವಿ ಬೇಕು ಎಂದು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಜಾರ್ಜ್‌‌ಶೀಟ್‌ ಸಲ್ಲಿಕೆ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆ ದರ್ಶನ್ ಟಿವಿ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

Advertisement

ಇಂದು ಸೆಲ್ ಬಳಿ ಸಿಬ್ಬಂದಿ ತಿಂಡಿ ಕೊಡಲು ಹೋಗಿದ್ದಾಗ ಚಾರ್ಜ್‌‌ಶೀಟ್‌ ಸಲ್ಲಿಕೆ ವಿಚಾರದ ಬಗ್ಗೆ ದರ್ಶನ್  ಕೇಳಿದ್ದು, ಮಾಹಿತಿ ಸಿಗದೇ ಇದ್ದಾಗ ಜೈಲು ಸಿಬ್ಬಂದಿ ಬಳಿ ಮಧ್ಯಾಹ್ನದ ಊಟ ಕೊಡಲು ಹೋದಾಗ ಟಿವಿ ಬಗ್ಗೆ ವಿಚಾರಿಸಿದ್ದಾರೆ. ಆಗ ಟಿವಿ ಬೇಕು ಅನ್ನುವುದಾದರೆ ಮೇಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಎಂದು ಸಿಬ್ಬಂದಿ ಹೇಳಿದರು. ಹೀಗಾಗಿ ಟಿವಿ ಬೇಕು ಎಂದು ದರ್ಶನ್ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಜೈಲಿನ ಮ್ಯಾನುವಲ್ ಪ್ರಕಾರ ಕೈದಿಗಳಿಗೆ ಟಿವಿ ಕೊಡುವುದಕ್ಕೆ ಅವಕಾಶ ಇದೆ. ಸದ್ಯ ದರ್ಶನ್ ಸೆಲ್‌ನಲ್ಲಿ ಟಿವಿ ಇಲ್ಲ. ಈಗ ದರ್ಶನ್ ಸೆಲ್‌ಗೆ ಟಿವಿ ಕೊಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article