ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಡಿಕೆಶಿ ಜನರ ಹಿತ, ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ' - ಆರ್.ಅಶೋಕ್ ವಾಗ್ದಾಳಿ

06:27 PM Dec 02, 2023 IST | Bcsuddi
Advertisement

ಬೆಂಗಳೂರು: ರಾಜ್ಯದ ಜನರ ಕಷ್ಟಗಳ ಬಗ್ಗೆ ನಾವು ಮಾತಾಡುತ್ತಿದ್ದರೆ ಇತ್ತ ಡಿ.ಕೆ ಶಿವಕುಮಾರ್ ಅವರು ಜನರ ಹಿತ ಹಾಗೂ ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Advertisement

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ಶಾಸಕರಿಗೆ ಯಾವ ಹೋಟೆಲ್‍ನಲ್ಲಿ ಇರಿಸಬೇಕು. ಮಟನ್ ಬಿರಿಯಾನಿ ಇಲ್ಲವೇ ಚಿಕನ್ ಬಿರಿಯಾನಿ ಕೊಡಿಸಬೇಕಾ ಅಂತ ವಿಚಾರಿಸಲು ತೆರಳಿದ್ದಾರೆ ಎಂದರು.

ಇನ್ನು ಡಿಕೆಶಿಗೆ ತೆಲಂಗಾಣದ ಶಾಸಕರ ಹಿತವೇ ಮುಖ್ಯವಾಗಿದ್ದು, ಸರ್ಕಾರ ಬಂದಾಗಿಂದ 60 ತಪ್ಪುಗಳಾಗಿವೆ. ಅಧಿಕಾರಕ್ಕೆ ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದಿದ್ದರು. ಅಲ್ಲದೇ ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Next Article