'ಡಿಕೆಶಿ-ವಿಜಯೇಂದ್ರ ನಡುವೆ ಅಡ್ಜೆಸ್ಟ್ಮೆಂಟ್ ಇದೆ'- ಯತ್ನಾಳ್
06:09 PM Aug 03, 2024 IST
|
BC Suddi
Advertisement
ವಿಜಯಪುರ: ಡಿಕೆಶಿ-ವಿಜಯೇಂದ್ರ ನಡುವೆ ಅಡ್ಜೆಸ್ಟ್ಮೆಂಟ್ ಇದೆ. ಅಡ್ಜೆಸ್ಟ್ಮೆಂಟ್ ಇದೆ ಅನ್ನೋದು 100% ನಿಜ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
Advertisement
ವಿಜಯಪುರದಲ್ಲಿ ಮಾತನಾಡಿದ ಅವರು, ಭೋವಿ, ತಾಂಡಾ ನಿಗಮಗಳ ತನಿಖೆ ಆಗಲಿ. ಭ್ರಷ್ಟ ಕುಟುಂಬವನ್ನ ಬಿಜೆಪಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಡಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಧಮ್, ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಸವಾಲು ಹಾಕಿದರು.
ವಿಜಯೇಂದ್ರ ಕೊರೊನಾ ಸಂದರ್ಭದಲ್ಲಿ ಮಾಡಿದ ಭ್ರಷ್ಟಾಚಾರ ಹೊರಗೆ ಬರಲಿ. ಭ್ರಷ್ಟಾಚಾರ ಮಾಡಿದವರು ಭ್ರಷ್ಟಾಚಾರ ವಿರುದ್ಧ ಮಾಡುತ್ತಿರುವ ಹೋರಾಟಕ್ಕೆ ಬೆಂಬಲ ಇಲ್ಲ. ವಿಜಯೇಂದ್ರ ಹಾಗೂ ಡಿಕೆಶಿ ಇಬ್ಬರೂ ಭ್ರಷ್ಟರು. ಇಬ್ಬರು ಸೇರಿಯೇ ಬಿಸಿನೆಸ್ ಮಾಡ್ತಿದ್ದಾರೆ. ಯಡಿಯೂರಪ್ಪ ಸಹ ಯಾವುದೇ ಪಕ್ಷದ ವೇದಿಕೆಗೆ ಬರಬಾರದು. ಯಡಿಯೂರಪ್ಪ ಮೇಲೆ ಗಂಭೀರ ಆರೋಪಗಳಿವೆ. ಅವರು ವೇದಿಕೆಗೆ ಬರಲೇಬಾರದು ಎಂದು ವಾಗ್ದಾಳಿ ನಡೆಸಿದರು.
Next Article