ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಡಿ.ಕೆ ಶಿವಕುಮಾರ್ ಸಂಘಟನೆಯಲ್ಲಿ ನನಗಿಂತ ಮುಂದಿದ್ದಾರೆ -ಸಿ ಎಂ

06:22 PM Dec 31, 2023 IST | Bcsuddi
Advertisement

ಬೆಂಗಳೂರು: ಡಿ.ಕೆ ಶಿವಕುಮಾರ್ ಕ್ಕಿಂತ ಮುಂಚಿನಿಂದಲೂ ನಾನು ರಾಜಕೀಯದಲ್ಲಿ ಇದ್ರುನೂ, ಅವರು ನನಗಿಂತ ಸಂಘಟನೆಯಲ್ಲಿ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಇಂದು ಹಮ್ಮಿಕೊಂಡಿದ್ದ 2023ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿ ಎಂ ಸಿದ್ದರಾಮಯ್ಯ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಪ್ರೆಸ್ ಕ್ಲಬ್ ವಾರ್ಷಿಕ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಈ ಬಾರಿಯೂ ಕೂಡ ಬಂದಿದ್ದೇನೆ. ನಾಳೆ ಹೊಸ ವರ್ಷ ಪ್ರಾರಂಭವಾಗ್ತಿದೆ.ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದರು.

ಇನ್ನು 2023ರ ವರ್ಷದ ವ್ಯಕ್ತಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನ ಆಯ್ಕೆ ಮಾಡಿದ್ದೀರಾ. ಅವರು ಕ್ರಿಯಾ ಶೀಲ ವ್ಯಕ್ತಿ, ಸಂಘಟನೆಯಲ್ಲಿ ಚತುರತೆ ಇರುವ ವ್ಯಕ್ತಿ. ಆದರೆ, ಅವರಿಗಿಂತ ಮುಂಚಿನಿಂದಲೂ ನಾನು ರಾಜಕೀಯದಲ್ಲಿ ಇದ್ರುನೂ, ಅವರು ನನಗಿಂತ ಸಂಘಟನೆಯಲ್ಲಿ ಮುಂದಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಅವರನ್ನು ಶ್ಲಾಘಿಸಿದರು.

Advertisement
Next Article