ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
07:59 AM Dec 05, 2023 IST | Bcsuddi
Advertisement
ವಿಜಯಪುರ: ಇಲ್ಲಿನ ರಾಜಗುರು ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ರಾಶಿಯೊಳಗೆ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ.
ಮೃತರು ಬಿಹಾರ ಮೂಲದ ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ (29) ಸಂಬೂ ಮುಖಿಯಾ(26) ಎಂದು ತಿಳಿದುಬಂದಿದೆ.
Advertisement
ರಕ್ಷಣಾ ತಂಡ ಸೋನುಕುಮಾರ್ ಎಂಬಾತನನ್ನು ರಕ್ಷಿಸಿದೆ. ರಾಶಿಯೊಳಗೆ 6 ರಿಂದ 7 ಜನ ಕಾರ್ಮಿಕರು ಸಿಲುಕಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಎರಡು ಎಸ್ಡಿಆರ್ಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.