ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ತನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ'- ಸಿಎಂಗೆ ಪ್ರತಾಪ್ ಸಿಂಹ ತಿರುಗೇಟು

06:41 PM Dec 31, 2023 IST | Bcsuddi
Advertisement

ಮೈಸೂರು: ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ, ತಮ್ಮ ಮಗನನ್ನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ನನ್ನನ್ನು ಮುಗಿಸಲು ಎಲ್ಲ ಪ್ರಯತ್ನ ಮಾಡುತ್ತಿದ್ದೀರಿ. ಇಂತಹ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನನ್ನ ತಮ್ಮನನ್ನು ಅರೇಸ್ಟ್ ಮಾಡಿಸಿದ್ದೀರಿ. ನೀವು ಬ್ರಿಲಿಯೆಂಟ್ ಪಾಲಿಟಿಷಿಯನ್ ಎಂದು ಸಿದ್ದರಾಮಯ್ಯ ಅವರಿಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

Advertisement

ಹಾಸನದಲ್ಲಿ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಆರೋಪ ಪ್ರಕರಣದಲ್ಲಿ ಸಂಸದ ಪ್ರತಾಪ್​ ಸಿಂಹ ಅವರ ತಮ್ಮ ವಿಕ್ರಮ್ ಸಿಂಹ ಅರೆಸ್ಟ್ ಆಗಿದ್ದಾರೆ. ಆದರೀಗ ಈ ವಿಚಾರವಾಗಿ ಪ್ರತಾಪ್​ ಸಿಂಹ ಮಾತನಾಡಿದ್ದಾರೆ, ಬೆಳಗಾವಿಯಲ್ಲಿ ಹಿಂದುಳಿದ ಮಹಿಳೆಯನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದಾರೆ. ಆ ವಿಚಾರವನ್ನ ನೀವು ನನ್ನ ವಿಷ್ಯ ಇಟ್ಟುಕೊಂಡು ಡೈವರ್ಟ್ ಮಾಡ್ತೀರಿ. ನೀವು, ನಿಮ್ಮ ಸಚಿವ ಸಂಪುಟದ ಸದಸ್ಯರು, ಡಿಸಿಎಂ‌ ಎಲ್ಲರೂ ಪಾರ್ಲಿಮೆಂಟ್ ಪಾಸ್ ಇಟ್ಕೊಂಡು ಮಾತಾಡ್ತೀರಿ. ಪ್ರತಾಪ್ ಸಿಂಹನ ತಮ್ಮನನ್ನು ಸಿನಿಮೀಯ ಶೈಲಿ ಚೇಸ್ ಮಾಡಿ ಅರೆಸ್ಟ್ ಮಾಡಿದ್ದಾರೆ. ನಿಜಕ್ಕೂ‌ ನೀವು ಬ್ರಿಲಿಯಂಟ್ ಪಾಲಿಟಿಷಿಯನ್ ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ.

ನಿಮ್ಮ ರಾಜಕೀಯ ಭವಿಷ್ಯಕ್ಕಾಗಿ ಪ್ರತಾಪ್ ಸಿಂಹನನ್ನ ಎಲ್ಲಾ‌ ರೀತಿ ತುಳಿಯುವ ಪ್ರಯತ್ನ ನಡೆಯುತ್ತಿದೆ. ನನ್ನ ಚಾರಿತ್ರ್ಯವಧೆ ಮಾಡಲಾಗಿದೆ. ನನ್ನ ಕುಟುಂಬದವರನ್ನ ಬೀದಿಗೆ ಎಳೆ ತರುತ್ತಿದ್ದೀರಿ. ನನ್ನ ತಮ್ಮನನ್ನು ಅರೆಸ್ಟ್ ಮಾಡಿದ್ದೀರಿ. ಆದರೆ ಈವರಗೆ ಯಾಕೆ‌ ಕೋರ್ಟಿಗೆ ಪ್ರೊಡ್ಯೂಸ್ ಮಾಡಿಲ್ಲ. ನಿಮ್ಮ ಮಗನನ್ನ ರಿಹ್ಯಾಬಿಲೇಟ್ ಮಾಡಲು ನನ್ನನ್ನ ಬಲಿ ಕೊಡ್ತಿದ್ದೀರಿ, ಆದರೆ ಇದಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

Advertisement
Next Article