For the best experience, open
https://m.bcsuddi.com
on your mobile browser.
Advertisement

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಬಿಜೆಪಿ ಅಭ್ಯರ್ಥಿ ಕೆ.ಅಣ್ಣಾಮಲೈ ಹಿನ್ನಡೆ

11:26 AM Jun 04, 2024 IST | Bcsuddi
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ  ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ ಹಿನ್ನಡೆ
Advertisement

ಕೊಯಮತ್ತೂರು: ಭಾರತೀಯ ಜನತಾ ಪಕ್ಷದ ತಮಿಳುನಾಡು ಅಧ್ಯಕ್ಷ ಮತ್ತು ಪಕ್ಷದ ನಾಯಕ ಕೆ.ಅಣ್ಣಾಮಲೈ ಕೊಯಮತ್ತೂರಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್‌ಗಿಂತ ಹಿನ್ನಡೆಯಲ್ಲಿದ್ದಾರೆ.\

ಪ್ರಸ್ತುತ ಡಿಎಂಕೆ ಅಭ್ಯರ್ಥಿ ರಾಜ್‌ಕುಮಾರ್ 25,558 ಮತಗಳನ್ನು ಪಡೆದು 12,663 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಅಣ್ಣಾಮಲೈ ಎರಡನೇ ಸ್ಥಾನದಲ್ಲಿದ್ದು 12,895 ಮತಗಳನ್ನು ಪಡೆದಿದ್ದಾರೆ. ಪಕ್ಷದ ಭದ್ರಕೋಟೆಯಾಗಿದ್ದರೂ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಅಭ್ಯರ್ಥಿ 8,572 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ತಮಿಳುನಾಡಿನಲ್ಲಿ ಬೆಳಗ್ಗೆ 9.30ಕ್ಕೆ ಡಿಎಂಕೆ ನೇತೃತ್ವದ ಮೈತ್ರಿಕೂಟ 36 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Advertisement

Author Image

Advertisement