For the best experience, open
https://m.bcsuddi.com
on your mobile browser.
Advertisement

'ತಾಳಿ ಒಬ್ಬರ ಹತ್ತಿರ ಕಟ್ಟಿಸಿಕೊಂಡು ಸಂಸಾರ ಮತ್ತೊಬ್ಬರ ಜೊತೆ ಮಾಡಬಾರದು'- ಈಶ್ವರಪ್ಪ ಕಿಡಿ

04:28 PM Dec 19, 2023 IST | Bcsuddi
 ತಾಳಿ ಒಬ್ಬರ ಹತ್ತಿರ ಕಟ್ಟಿಸಿಕೊಂಡು ಸಂಸಾರ ಮತ್ತೊಬ್ಬರ ಜೊತೆ ಮಾಡಬಾರದು   ಈಶ್ವರಪ್ಪ ಕಿಡಿ
Advertisement

ರಾಯಚೂರು:ಶಾಸಕ ಎಸ್.ಟಿ ಸೋಮಶೇಖರ್ ಹಾಗೂ ಹೆಬ್ಬಾರ್ ತಾಳಿ ಒಂದು ಕಡೆ ಕಟ್ಟಿಸಿಕೊಂಡು ಸಂಸಾರ ಇನ್ನೊಬ್ಬರ ಜೊತೆ ಮಾಡಬಾರದು ಅಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಮಾಧ್ಯಮಕ್ಕೆ ಮಾತನಾಡಿದ ಅವರು, ಚುನವಾಣೆಯಲ್ಲಿ ನಿಲ್ಲಿಸಿ, ಗೆಲ್ಲಿಸಿ ಮಂತ್ರಿ ಮಾಡಿ ಆಯಿತು, ಈಗ ಮತ್ತೆ ಗೆದ್ದಾಯ್ತು. ಈಗ ಸಿದ್ದರಾಮಯ್ಯ ಡಿಕೆಶಿ ಕಡೆ ಒಲವಾಗಿದೆ. ಬಿಜೆಪಿ ಅಲ್ಲಿ ಇರುವ ಹಾಗಿದ್ರೆ ಇರಿ, ಇಲ್ಲಾ ಹೋಗಿ. ತಾಳಿ ಒಬ್ಬರತ್ರ ಕಟ್ಟಿಸಿಕೊಂಡು ಸಂಸಾರ ಮತ್ತೊಬ್ಬರ ಜೊತೆ ಮಾಡಬಾರದು.

ಅದು ನಮ್ಮ ಸಂಸ್ಕೃತಿ ಅಲ್ಲ. ಅವರಿಂದ ವೈಯಕ್ತಿಕವಾಗಿ ನೊಂದಿದ್ದೇನೆ ಅಂತ ಈಶ್ವರಪ್ಪ ಹೇಳಿದರು.

Advertisement

Author Image

Advertisement