ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ

09:29 AM Sep 23, 2024 IST | BC Suddi
Advertisement

ಅಮರಾವತಿ:ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

Advertisement

ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಮ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.

ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

Advertisement
Next Article