ತಿರುಪತಿ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ!
11:28 AM Sep 24, 2024 IST
|
BC Suddi
Advertisement
ಹೈದರಾಬಾದ್ : ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ.
Advertisement
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದೆ.ಗೊಲ್ಲಗುಡೆಂ ಪಂಚಾಯತ್ನ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ ತೆರಳಿದ್ದರು. ಪ್ರಸಾದ ರೂಪದಲ್ಲಿ ತಂದಿದ್ದ ಲಡ್ಡುವಿನಲ್ಲಿ ಸಣ್ಣ ಪೇಪರ್ನಲ್ಲಿ ಕಟ್ಟಿದ್ದ ಗುಟ್ಕಾ ಪತ್ತೆಯಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Next Article