For the best experience, open
https://m.bcsuddi.com
on your mobile browser.
Advertisement

'ತಿರುಪತಿ ಲಾಡು ಕಲಬೆರಕೆ ವಿಚಾರ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ' - ಸಚಿವ ನಾರಾ ಲೋಕೇಶ್

11:40 AM Sep 22, 2024 IST | BC Suddi
 ತಿರುಪತಿ ಲಾಡು ಕಲಬೆರಕೆ ವಿಚಾರ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ    ಸಚಿವ ನಾರಾ ಲೋಕೇಶ್
Advertisement

ವಿಜಯವಾಡ: ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಆಂಧ್ರ ಪ್ರದೇಶ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿರುಪತಿ ಲಾಡುವಿನಲ್ಲಿ ಕಲಬೆರಕೆ ನಡೆದಿದೆ ಎಂಬುದು ಎನ್‌ಡಿಬಿಯ ವರದಿಯಲ್ಲಿ ಸ್ಪಷ್ಟವಾಗಿದೆ. ಇದು ಆರೋಪವಲ್ಲ,
ಚಂದ್ರಬಾಬು ನಾಯ್ಡು ಅವರು ಸತ್ಯವನ್ನು ಹೇಳುತ್ತಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ನಾವು ಬಿಡುವುದಿಲ್ಲ. ಅಲ್ಲದೆ, ಈ ವಿಷಯವನ್ನು ಕೇವಲ ಸಿಬಿಐ ತನಿಖೆಗೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಮಾದರಿಯ ಅಕ್ರಮಗಳು ಮರುಕಳಿಸದಂತೆ ನೋ ಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಿಎಂ ಯೋಚಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Advertisement

Author Image

Advertisement