For the best experience, open
https://m.bcsuddi.com
on your mobile browser.
Advertisement

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಹೈಕೋರ್ಟ್ ನೋಟಿಸ್

03:46 PM Aug 22, 2024 IST | BC Suddi
ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಹೈಕೋರ್ಟ್ ನೋಟಿಸ್
Advertisement

ಹೈದರಾಬಾದ್: ಬಿಜೆಪಿ ಗೆದ್ದರೆ ಮೀಸಲಾತಿ ತೆಗೆದು ಹಾಕುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೊಥಗುಡೆಮ್ನಲ್ಲಿ ನಡೆದ ರ್‍ಯಾಲಿಯಲ್ಲಿ ರೇವಂತ್ ರೆಡ್ಡಿ ಬಿಜೆಪಿಯನ್ನು ಟೀಕಿಸಿದ್ದರು. ಬಿಜೆಪಿ ಮತ್ತೆ ಗೆದ್ದರೆ ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರೇವಂತ್ ಹೇಳಿದರು. ರೇವಂತ್ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಸಮ್ ವೆಂಕಟೇಶ್ವರಲು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಕೆಳ ನ್ಯಾಯಾಲಯವು ಪ್ರಕರಣವನ್ನು ಹಲವಾರು ಬಾರಿ ಮುಂದೂಡಿದ ನಂತರ ಹೈಕೋರ್ಟ್‌ಗೆ ಮೊರೆ ಹೋದರು. ಹೈಕೋರ್ಟ್ ನಿರ್ದೇಶನದ ಮೇರೆಗೆ ರೇವಂತ್ ಅವರ ಹೇಳಿಕೆಗೆ ನೋಟಿಸ್ ನೀಡಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement

Author Image

Advertisement