For the best experience, open
https://m.bcsuddi.com
on your mobile browser.
Advertisement

'ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ'- ಹೆಚ್‌ಡಿಕೆಗೆ ದಿನೇಶ್‌ ಗುಂಡೂರಾವ್‌ ಟಾಂಗ್‌

03:57 PM Dec 06, 2023 IST | Bcsuddi
 ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ   ಹೆಚ್‌ಡಿಕೆಗೆ ದಿನೇಶ್‌ ಗುಂಡೂರಾವ್‌ ಟಾಂಗ್‌
Advertisement

ಬೆಂಗಳೂರು: ಚುನಾವಣೆಗೆ ಮುಂಚೆ ಮುಸ್ಲಿಮರನ್ನು ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈಗ ಮುಸ್ಲಿಂ ದ್ವೇಷಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಧರ್ಮದ ನಡುವೆ ಬೆಂಕಿ ಹಚ್ಚಿ ದೇಶ ಒಡೆಯುವ ಬಿಜೆಪಿಯವರ ಧರ್ಮ ರೋಗ ನಿಮಗೂ ಅಂಟಿದ್ದಕ್ಕೆ ವಿಷಾದವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲಿದೆ ಎಂಬ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?. ಸಿದ್ದರಾಮಯ್ಯ ಏನಾದರೂ ದೇಶದ ಸಂಪತ್ತೆಲ್ಲಾ ಮುಸ್ಲಿಮರಿಗೇ ಸೇರಬೇಕು ಎಂದಿದ್ದಾರಾ?. ಹಾಗೇನಾದರೂ ಹೇಳಿಕೆ ಕೊಟ್ಟಿದಿದ್ದರೆ ಜೆಡಿಎಸ್- ಬಿಜೆಪಿಯವರು ವಿರೋಧಿಸುವುದರಲ್ಲಿ ಅರ್ಥವಿರುತಿತ್ತು. ಈ ದೇಶದಲ್ಲಿರುವ ಮುಸ್ಲಿಮರು ಭಾರತೀಯರೇ ಹೊರತು ಅನ್ಯದೇಶದವರಲ್ಲ ಎಂದಿದ್ದಾರೆ.

Advertisement

ನಮ್ಮ ಸಂವಿಧಾನ ಮುಸ್ಲಿಂರಿಗೂ ಸಮಾನ ಹಕ್ಕು ಕಲ್ಪಿಸಿದೆ. ಹೀಗಾಗಿ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಪಾಲಿದೆ ಎಂಬ ಸಿದ್ದಾರಾಮಯ್ಯರ ಹೇಳಿಕೆಯಲ್ಲಿ ಯಾವ ತಪ್ಪೂ ಇಲ್ಲ. ಈಗ ಸಿದ್ದರಾಮಯ್ಯರ ಹೇಳಿಕೆಗೆ ವಿವಾದದ ಸ್ವರೂಪ ನೀಡುತ್ತಿರುವ ಕುಮಾರಸ್ವಾಮಿಯವರಿಗೆ ಮುಸ್ಲಿಮರು ಭಾರತೀಯರು ಅಲ್ಲ ಎನ್ನುವ ಧೈರ್ಯವಿದೆಯೇ? ಎಂದು ಪ್ರಶ್ನಿಸಿದರು.

Author Image

Advertisement