ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ- ಗಂಭೀರ ಗಾಯ
04:01 PM Jan 01, 2024 IST | Bcsuddi
Advertisement
ರಾಮನಗರ: ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜ.01 ಬೆಳಿಗ್ಗೆ ರಾಮನಗರ, ಕನಕಪುರ ತಾಲೂಕಿನ ಬರಡನಹಳ್ಳಿಯಲ್ಲಿ ನಡೆದಿದೆ.
ಬರಡನಹಳ್ಳಿ ಗ್ರಾಮದ ದುಂಡಮ್ಮ (35) ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಆನೆ ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡಿರುವ ದುಂಡಮ್ಮ ಅವರ ಎಡಗೈ ಮುರಿದಿದ್ದು ಸದ್ಯ ಗ್ರಾಮಸ್ಥರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆನೆದಾಳಿಯಿಂದ ಗಾಯಗೊಂಡ ಅವರ ಚಿಕಿತ್ಸಾ ವೆಚ್ಚ ಭರಿಸಿ, ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ