For the best experience, open
https://m.bcsuddi.com
on your mobile browser.
Advertisement

ದನ ಕಳ್ಳಸಾಗಣೆದಾರರೆಂದು ತಪ್ಪಾಗಿ ಭಾವಿಸಿ ಪಿಯುಸಿ ವಿದ್ಯಾರ್ಥಿಯ ಹತ್ಯೆ..!

12:24 PM Sep 03, 2024 IST | BC Suddi
ದನ ಕಳ್ಳಸಾಗಣೆದಾರರೆಂದು ತಪ್ಪಾಗಿ ಭಾವಿಸಿ ಪಿಯುಸಿ ವಿದ್ಯಾರ್ಥಿಯ ಹತ್ಯೆ
Advertisement

PUC  ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರನೆಂದು ತಪ್ಪಾಗಿ ಭಾವಿಸಿ ಗೋರಕ್ಷಕರು ಕಾರಿನಲ್ಲಿ ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ಹರ್ಯಾಣದ ಫರಿದಾಬಾದ್‌ನಲ್ಲಿ ನಡೆದಿದೆ.
ಆರ್ಯನ್‌ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಕಾರಿನಲ್ಲಿ ಜಾನುವಾರು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆಂದು ಗೋರಕ್ಷಕರಿಗೆ ಮಾಹಿತಿ ಲಭಿಸಿತ್ತು.
ಆರೋಪಿಗಳು ಈ ವೇಳೆ ಕಾರಿನಲ್ಲಿ ಹೋಗುತ್ತಿದ್ದ ಆರ್ಯನ್‌ ಮಿಶ್ರಾ, ಆತನ ಸ್ನೇಹಿತರಾದ ಶಾಂಕಿ, ಹರ್ಷಿತ್‌ ಅವರನ್ನು ಜಾನುವಾರು ಕಳ್ಳಸಾಗಣೆದಾರರು ಅಂದುಕೊಂಡು ಹಿಂಬಾಲಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Author Image

Advertisement