ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದರ್ಶನ್ & ಟೀಮ್ ಹಿಂಡಲಗಾ ಜೈಲಿಗೆ ಶಿಫ್ಟ್ ಬಹುತೇಕ ಫಿಕ್ಸ್

02:49 PM Aug 26, 2024 IST | BC Suddi
Advertisement

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ & ಟೀಂ ಅನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವುದು ಬಹುತೇಕ ಫಿಕ್ಸ್ ಆಗಿದೆ. ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ರೌಡಿಶೀಟರ್ ಜೊತೆಗೆ ಹರಟೆ ಹೊಡೆಯುತ್ತಾ ಹಾಯಾಗಿ ಕುಳಿತ ಫೋಟೋ ವೈರಲ್ ಬೆನ್ನಲ್ಲೇ, ವಿಡಿಯೋ ಕಾಲ್ ದೃಶ್ಯದ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ದರ್ಶನ್ & ಗ್ಯಾಂಗ್‌ಅನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ಸಹ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಅಟ್ಟುವ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಈಗಾಗಲೇ ಬೆಂಗಳೂರು ಪೊಲೀಸರು ಕೋಕಾ ಕಾಯ್ದೆಯಡಿ ಇರುವವರನ್ನ ಶಿಫ್ಟ್ ಮಾಡಲು ಪತ್ರ ಬರೆದಿದ್ದರು. ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಸೇರಿದಂತೆ 26 ಆರೋಪಿಗಳ ಶಿಫ್ಟ್‌ ಮಾಡಲಾಗುತ್ತಿದೆ. ಆದರೆ ಕಾನೂನು ವಿಚಾರವಾಗಿ ಜೈಲು ಅಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ನ್ಯಾಯಾಲಯದ ಅನುಮತಿ ಬೇಕಾ ಅಥವಾ ಜೈಲು ಆಡಳಿತವೇ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಜೈಲು ಆಡಳಿತವೇ ನಿರ್ಧಾರ ತೆಗೆದುಕೊಳ್ಳಬಹುದು ಎಂದಾರೆ ಇಂದೇ ಶಿಫ್ಟ್ ಸಾಧ್ಯತೆ ಇದೆ.

Advertisement

Advertisement
Next Article