ದರ್ಶನ್ ಪರವಾಗಿ ಪ್ರಭಾವಿ ಸಚಿವರ ಲಾಬಿ - ಪೊಲೀಸರಿಗೆ ಒತ್ತಡ..!
12:17 PM Jun 19, 2024 IST
|
Bcsuddi
Advertisement
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಅವರನ್ನು ಗ್ಯಾಂಗ್ನಿಂದ ಎಸ್.ಪಿ.ಪಿ. (Special Public Prosecutors) ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
Advertisement
ಎಸ್.ಪಿ.ಪಿ. ಪ್ರಸನ್ನಕುಮಾರ್ ಅವರನ್ನು ಬದಲಾವಣೆ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ದರ್ಶನ್ ರಕ್ಷಣೆಗೆ ಸರ್ಕಾರ ಮುಂದಾಗಿದೆ ಆದರೆ, ಎಸ್.ಪಿ.ಪಿ. ಬದಲಾಯಿಸಿದರೆ ಮತ್ತಷ್ಟು ಅನುಮಾನ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಇನ್ನೂ ಸರ್ಕಾರ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ರಕ್ಷಣೆಗೆ ಮೂವರು ಪ್ರಭಾವಿ ಸಚಿವರು ಮುಖ್ಯಮಂತ್ರಿ ಮೇಲೆ ಈ ಕುರಿತಾಗಿ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.
ದರ್ಶನ್ ಪರವಾಗಿ ಲಾಬಿ ಮಾಡುತ್ತಿರುವ ಸಚಿವರು ಕೆ.ಎನ್. ಜಗದೀಶ್ ಅಥವಾ ಭಾನುಪ್ರಕಾಶ್ ಅವರನ್ನು ನೂತನ ಎಸ್ಪಿಪಿಯಾಗಿ ನೇಮಕ ಮಾಡುವಂತೆ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.
Next Article