For the best experience, open
https://m.bcsuddi.com
on your mobile browser.
Advertisement

ದರ್ಶನ್‌ ವೈದ್ಯಕೀಯ ವರದಿ ಸಲ್ಲಿಸಿ- ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶನ

02:55 PM Oct 22, 2024 IST | BC Suddi
ದರ್ಶನ್‌ ವೈದ್ಯಕೀಯ ವರದಿ ಸಲ್ಲಿಸಿ  ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶನ
Advertisement

ಬೆಂಗಳೂರು : ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಿ ಎಂದು ಬಳ್ಳಾರಿ ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ದರ್ಶನ್ ಪರ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ. ನಾಗೇಶ್, ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ. ಅವರಿಗೆ ಬಳ್ಳಾರಿಯ ವಿಮ್ಸ್ ಅಸ್ಪತ್ರೆಯಲ್ಲಿ ಸೋಮವಾರ ಎಂಆರ್‌ಐ ಸ್ಕ್ಯಾ ಮಾಡಿಸಲಾಗಿದೆ. ವೈದ್ಯರು ಶಸ್ತ್ರ ಚಿಕಿತ್ಸೆ ಅಗತ್ಯವೆಂದು ತಿಳಿಸಿದ್ದಾರೆ. ಹೀಗಾಗಿ ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಮನವಿ ಮಾಡಲಾಯಿತು.

ಇದನ್ನು ಆಲಿಸಿದ ನ್ಯಾಯಪೀಠ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಿ ಎಂದು ಬಳ್ಳಾರಿಯ ಕೇಂದ್ರ ಕಾರಾಗೃಹದ ಅಧಿಕಾರಿಗೆ ನಿರ್ದೇಶಿಸಿತು. ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಲಾಗಿದೆ.

Advertisement

Author Image

Advertisement