For the best experience, open
https://m.bcsuddi.com
on your mobile browser.
Advertisement

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5-30 ಕೋಟಿ ಹಣ ವಶ.!

05:08 PM Mar 22, 2024 IST | Bcsuddi
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 30 ಕೋಟಿ ಹಣ ವಶ
Advertisement

ಬೆಂಗಳೂರು: ರಾಮನಗರ ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ.

ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ಇಂದು ತಪಾಸಣೆ ವೇಳೆ ಕಂತೆ ಕಂತೆ‌ ನೋಟು ಪತ್ತೆಯಾಗಿದ್ದು, ಬ್ಯಾಂಕಿಗೆ ಸೇರಿರುವ ಹಣ ಎಂದು ವಾಹನ ಮಾಲೀಕರು ಹೇಳುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಬ್ಯಾಂಕ್ ದಾಖಲೆ ಕೇಳಿರುವ ಬಿಡದಿ ಪೊಲಿಸರು, ಸಮರ್ಪಕ ದಾಖಲೆಗಾಗಿ ಕಾಯುತಿದ್ದಾರೆ ಎಂದು ತಿಳಿದುಬಂದಿದೆ.

Advertisement

Tags :
Author Image

Advertisement