ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದೂರದರ್ಶನದಲ್ಲಿ ಲೈವ್ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಸಾವು

10:25 AM Jan 13, 2024 IST | Bcsuddi
Advertisement

ಕೇರಳ: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಕಾರ್ಯಕ್ರಮದಲ್ಲಿ ಕೃಷಿ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ.

Advertisement

ಮೃತರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ.

ಡಾ. ಅನಿ ದಾಸ್ ಅವರು ಕೃಷಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದರು. ಶುಕ್ರವಾರ ಕೂಡ ದೂರದರ್ಶನದಲ್ಲಿ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನು ಕಾರ್ಯಕ್ರಮ ನೀಡುತ್ತಿದ್ದ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿ ದಢೀರನೇ ಕುಸಿದು ಬಿದ್ದರು. ಕುಸಿದು ಬಿದ್ದ ಅನಿ ದಾಸ್ ಅವರನ್ನು ತಕ್ಷಣವೇ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement
Next Article